PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಭಾರತೀಯ ಹೈಕಮಿಷನ್‌ ಕಚೇರಿಗೆ ಭದ್ರತೆ ಒದಗಿಸಿದ ಬ್ರಿಟನ್‌ ಸರ್ಕಾರ

March 23, 2023

ಭಾರತೀಯ ಅಮೆರಿಕನ್ ನಟಿಗೆ ರಾಷ್ಟ್ರೀಯ ಪದಕ ನೀಡಿದ ಬೈಡನ್

March 23, 2023

ಅಧ್ಯಕ್ಷ ಪುಟಿನ್ ಟೀಕಿಸಿ ಹಾಡಿದ್ದ ರಷ್ಯಾದ ಪಾಪ್ ತಾರೆ ಸಾವು

March 23, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » Pramod Muthalik: ಅಖಿಲ ಭಾರತ ಹಿಂದೂ ಮಹಾಸಭಾದಲ್ಲಿ ಶಿವಾಜಿ ಹೇಳುವಂತಹ ಮತಾಂಧರನ್ನು ಎದುರಿಸಿ
ಜಿಲ್ಲೆ Prajatv KannadaBy Prajatv KannadaMarch 3, 2023

Pramod Muthalik: ಅಖಿಲ ಭಾರತ ಹಿಂದೂ ಮಹಾಸಭಾದಲ್ಲಿ ಶಿವಾಜಿ ಹೇಳುವಂತಹ ಮತಾಂಧರನ್ನು ಎದುರಿಸಿ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಶಿರಸಿ: ಛತ್ರಪತಿ ಶಿವಾಜಿ ಮಹಾರಾಜರ ವಿಚಾರ ಇಂದಿಗೂ ಪ್ರಸ್ತುತವಿದೆ. ಭಾರತದ ಗಡಿ ಸುತ್ತಲೂ ಇಸ್ಲಾಮೀಕರಣದ ವಾತಾವರಣ ಹೆಚ್ಚುತ್ತಿದೆ. ಶಿವಾಜಿ ಮಹಾರಾಜರ ಮಾದರಿಯಲ್ಲಿ ಮತಾಂಧರನ್ನು ಎದುರಿಸಬೇಕಿದೆ. ಇಂದು ಮನೆ ಮನೆಯಲ್ಲಿ ಜೀಜಾಮಾತೆಯ ಅವಶ್ಯಕತೆಯಿದೆ. ರಾಷ್ಟ್ರಕ್ಕಾಗಿ, ಧರ್ಮಕ್ಕಾಗಿ, ಸಂಸ್ಕೃತಿಗಾಗಿ ಮನೆಯ ಮಕ್ಕಳನ್ನು ಹೋರಾಡಲು ಸಜ್ಜುಗೊಳಿಸುವ ಜೀಜಾಮಾತೆಯರು ಪ್ರತಿ ಮನೆಯಿಂದ ಬರಬೇಕಾಗಿದೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಹೇಳಿದರು

ನಗರದಲ್ಲಿಅಖಿಲ ಭಾರತ ಹಿಂದೂ ಮಹಾಸಭಾದಿಂದ ಆಯೋಜಿಸಿದ್ದ ಹಿಂದೂ ಸಮಾಜೋತ್ಸವದಲ್ಲಿಅವರು ಮಾತನಾಡಿದರು.

ಕಾಂಗ್ರೆಸ್‌ನಿಂದ ದೇಶ ಹಾಳು
ರಾಷ್ಟ್ರೀಯ ಸ್ವಯಂಸೇವಕ ಸಂಘ ಕೊಟ್ಟ ಸಂಸ್ಕಾರ ಎಂದಿಗೂ ನನ್ನನ್ನು ಹಿಂದೆ ಸರಿಯುವಂತೆ ಮಾಡುವುದಿಲ್ಲ. ಹಿಂದೂ ಸಮಾಜಕ್ಕಾಗಿ ನಿಸ್ವಾರ್ಥದಿಂದ ಬದುಕುತ್ತಿದ್ದೇನೆ. ದೇಶ ಆಳಿದ ಕಾಂಗ್ರೆಸ್‌ ಅಪ್ಜಲ್‌ ಖಾನ್‌, ಟಿಪ್ಪು ಸುಲ್ತಾನನ ಸಂತತಿಯಾಗಿದೆ. ಕಾಂಗ್ರೆಸ್‌ ದೇಶವನ್ನು ಬರ್ಬಾದ್‌ ಮಾಡಿದೆ. ಕಾಶ್ಮೀರದಲ್ಲಿಈಗಲೂ ಹಿಂದೂಗಳ ಹತ್ಯೆಯಾಗುತ್ತಿದೆ. ಹಿಂದೂಗಳನ್ನು ಸಂರಕ್ಷಿಸುವ ಕಾರ್ಯ ಎಲ್ಲರಿಂದ ನಡೆಯಬೇಕು ಎಂದರು. ಹಿಂದೂಗಳ ಹೆಸರಿನಲ್ಲಿ ಗೆದ್ದು, ಗೋಮಾತೆಯ ಹತ್ಯೆ ಖಂಡಿಸದ, ಭ್ರಷ್ಟಾಚಾರ ವಿರೋಧಿಸದ ಜನಪ್ರತಿನಿಧಿಗಳನ್ನು ಐದಾರು ಬಾರಿ ಶಾಸಕ-ಸಂಸದರನ್ನಾಗಿ ಆರಿಸುತ್ತಿರುವುದು ದೌರ್ಭಾಗ್ಯದ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.

ಅತಿಕ್ರಮಣ ಎದುರಿಸಿ
ಹಿಂದೂ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕಮಲೇಶದಾಸ್‌ ಮಹಾರಾಜ್‌ ಮಾತನಾಡಿ, ಭಾರತ ವ್ಯಾಪಾರದ ದೇಶವಲ್ಲ, ಬದಲಾಗಿ ಪರಿವಾರದ ದೇಶವಾಗಿದೆ. ದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ಅತಿಕ್ರಮಣವನ್ನು ನಾವೆಲ್ಲ ಜಾಗೃತಗೊಳ್ಳುವುದರ ಮೂಲಕ ಎದುರಿಸಬೇಕಿದೆ ಎಂದರು.

ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಠ್ಠಲ್‌ ಪೈ ಪ್ರಾಸ್ತಾವಿಕ ಮಾತುಗಳನ್ನಾಡಿ, ಹಿಂದೂ ಹೃದಯ ಸಾಮ್ರಾಟ್‌ ಛತ್ರಪತಿ ಶಿವಾಜಿ ಮಹಾರಾಜರ ಆದರ್ಶಗಳನ್ನು ಯುವ ಜನತೆ ಮೈಗೂಡಿಸಿಕೊಳ್ಳಬೇಕು. ಇಂದು ಹಿಂದೂಗಳ ಶಕ್ತಿಯನ್ನು ದಮನಗೊಳಿಸುವ ಕೆಲಸ ನಡೆಯುತ್ತಿದೆ. ಆಚಾರ್ಯ ಚಾಣಾಕ್ಯನ ಮಾತಿನಂತೆ ಅತ್ಯಾಚಾರ, ಅನಾಚಾರವನ್ನು ವಿರೋಧಿಸದ ಸಜ್ಜನರ ನಿಷ್ಕ್ರಿಯತೆ ದೇಶಕ್ಕೆ ಹೆಚ್ಚು ಮಾರಕ ಎಂದರು.

ಇದೇ ವೇಳೆ ವೇದಿಕೆಯಲ್ಲಿ ವಿಠ್ಠಲ್‌ ಪೈ ಅವರನ್ನು ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಕಾರ್ಯದರ್ಶಿಯಾಗಿ ಘೋಷಿಸಲಾಯಿತು.

ವೇದಿಕೆಯಲ್ಲಿ ತೆಲಂಗಾಣ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ಆತ್ಮಾರಾಮ್‌ ರಾಮದಾಸ್‌ ಜೀ, ಛತ್ರಪತಿ ಯುವಸೇನಾ ಅಧ್ಯಕ್ಷ ಯೋಗೇಶ ಪ್ರಭು ಮಹಾರಾಜ್‌, ಅಖಿಲ ಭಾರತ ಹಿಂದೂ ಮಹಾಸಭಾದ ಮುಖಂಡ ಗೋಪಾಲ ದೇವಾಡಿಗ ಇದ್ದರು. ದೇವರಾಜ ಮರಾಠಿ ಬಂಡಲ ಅಧ್ಯಕ್ಷತೆ ವಹಿಸಿದ್ದರು.

 

Share. Facebook Twitter WhatsApp Pinterest LinkedIn Tumblr Telegram Email

Related Posts

Ugadi 2023: ಹೊಸ ಸಂವತ್ಸರದ ಮೊದಲ ಬೇಸಾಯಕ್ಕೆ ಸಿದ್ಧತೆ; ರೈತರಲ್ಲಿ ಹೊಸ ಹುರುಪು

March 22, 2023

ಚುನಾವಣಾ ಗಿಮಿಕ್: ಬಿಜೆಪಿ ಶಾಸಕನಿಂದ ಮುಸ್ಲಿಂ ಟೋಪಿ ಧರಿಸಿ ಮಸೀದಿ ನಿರ್ಮಾಣಕ್ಕೆ ಭೂಮಿಪೂಜೆ

March 22, 2023

Rape attempt: ಮನೆ ಮುಂದೆ ನಿಂತಿದ್ದ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗಳಿಗಾಗಿ ಶೋಧ

March 22, 2023

ಲಾರಿ ಡಿಕ್ಕಿ – ಹೆದ್ದಾರಿಯಲ್ಲಿ ಚಲ್ಲಾಪಿಲ್ಲಿಯಾದ ಏಳು ಲಕ್ಷ ಮೌಲ್ಯದ ಮದ್ಯ

March 22, 2023

ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ: ಮುನ್ಸೂಚನೆ ನೀಡಿದ ಬೊಂಬೆ ಭವಿಷ್ಯ

March 22, 2023

ಮನೆಮನೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಿಂದ ವಿತರಣೆ

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.