PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸ್ಕಾಟ್ಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಪಾಕ್ ಮೂಲದ ಹಂಝಾ ಯೂಸುಫ್‌ ನೇಮಕ

March 29, 2023

ಕ್ಷಮೆ ಕೇಳದಿದ್ದರೆ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು FIR ದಾಖಲಿಸುತ್ತೇನೆ: ರಂಜಿತ್ ಸಾವರ್ಕರ್

March 29, 2023

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023
Facebook Twitter Instagram
Thursday, March 30
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಉರ್ದು ಭಾಷೆಗೆ ಭಾಷಾಂತರವಾದ “ಸಿರಿಗೆ ಸೆರೆ” ನಾಟಕ ಪುಸ್ತಕ ಲೋಕಾರ್ಪಣೆ
ಬೆಂಗಳೂರು Prajatv KannadaBy Prajatv KannadaMarch 18, 2023

ಉರ್ದು ಭಾಷೆಗೆ ಭಾಷಾಂತರವಾದ “ಸಿರಿಗೆ ಸೆರೆ” ನಾಟಕ ಪುಸ್ತಕ ಲೋಕಾರ್ಪಣೆ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು: ಕನ್ನಡ ಸಾಹಿತ್ಯ, ಉರ್ದು ಸಾಹಿತ್ಯ ಸೇರಿದಂತೆ ಭಾರತೀಯ ಭಾಷೆಗಳ ಸಾಹಿತ್ಯಗಳು ಹೆಚ್ಚು ಬೆಳಕು ಚೆಲ್ಲುವಂತಾಗಬೇಕು ಎಂದು ಬಿಬಿಎಂಪಿ ವಿಶೇಷ ಆಯುಕ್ತರು ಹಾಗೂ ಲೇಖಕರು ಆದ ಶ್ರೀ ಜಯರಾಮ್ ರಾಯಪುರ ರವರು ತಿಳಿಸಿದರು.

ಬಾಜ್ಮ್ ಇ ಗಲಿಹ್, ನಯಾ ಅದಬ್ ಹಾಗೂ ಕರ್ನಾಟಕ ಉರ್ದು ಅಕಾಡೆಮಿಯ ಸಹಯೋಗದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಡೆಯುತ್ತಿರುವ ಭಾರತೀಯ ಸಂಪ್ರದಾಯ ಮತ್ತು ಸೂಫಿಸಂ ಜೀವನ ಮತ್ತು ಹಜರತ್ ಅಮೀರ್ ಖುಸ್ರೋ ಅವರ ಕೆಲಸಗಳ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ದಲ್ಲಿ ನಾಡಫ್ರಭು ಕೆಂಪೇಗೌಡರ ಜೀವನಾಧಾರಿತ “ಸಿರಿಗೆ ಸೆರೆ” ಕನ್ನಡ ಭಾಷೆಯಿಂದ ಉರ್ದು ಭಾಷೆಗೆ ಭಾಷಾಂತರಿಸಿರುವ ಪುಸ್ತಕವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಅವರು ಮಾತನಾಡಿದರು.

ಬೆಂಗಳೂರನ್ನು ಕಟ್ಟಿ ಆಳಿದ ಕೆಂಪೇಗೌಡರ ಆಡಳಿತದ ಕೊನೆ ಅವಧಿಯ ಘಟನೆಗಳನ್ನಾಧರಿಸಿದ ನಾಟಕ ಇದಾಗಿದ್ದು, ಸಿರಿಗೆ ಸೆರೆ ನಾಟಕ ಪುಸ್ತಕವನ್ನು ಕನ್ನಡದಲ್ಲಿ 2015ರಲ್ಲಿ ಅನಾವರಣಗೊಳಿಸಲಾಯಿತು. ಆ ಬಳಿಕ ಹಿಂದಿ ಭಾಷೆಯಲ್ಲಿ ಭಾಷಾಂತರ ಮಾಡಲಾಯಿತು. ಇದೀಗ ಉರ್ದು ಭಾಷೆಗೆ ಭಾಷಾಂತರಿಸಿ ಇಂದು ಲೋಕಾರ್ಪಣೆಗೊಳಿಸಲಾಗಿದೆ ಎಂದು ಹೇಳಿದರು.

ಕರ್ನಾಟಕದ ಇತಿಹಾಸದಲ್ಲಿ ಕಡಿಮೆ ಸಂಖ್ಯೆಯಲ್ಲಿ ಇತಿಹಾಸದ ಮೇಲೆ ಪ್ರಭಾವವನ್ನು ಬಿಟ್ಟುಹೋಗಿದ್ದಾರೆ. ಅವರಲ್ಲಿ ನಾಡಪ್ರಭು ಕೆಂಪೇಗೌಡರು ಕೂಡಾ ಒಬ್ಬರು. ಸಣ್ಣ ಪರಿವಾರದಿಂದ ಬಂದಂತಹವರು ಒಂದು ನಾಡನ್ನು ಕಟ್ಟಿದಂತಹವರು. ವಿಜಯನಗರದ ಅರಸರಿಂದ ಕೆಂಪೇಗೌಡರ ನಡುವೆ ನಡೆಯುವ ಘಟನೆಗಳ ಕುರಿತು ಬರೆದ ನಾಟಕ ಇದಾಗಿದೆ ಎಂದು ತಿಳಿಸಿದರು. ಕರ್ನಾಟಕದಲ್ಲಿ ಉರ್ದು ಬರಹಗಾರರು ಸಾಕಷ್ಟಿದ್ದಾರೆ. ಉರ್ದು ಭಾಷೆಯಲ್ಲಿ ಬರೆಯುವಂತ ಹಾಗೂ ಓದುವ ಸಂಖ್ಯೆ ಇನ್ನೂ ಹೆಚ್ಚಾಗಬೇಕು. ಅಲ್ಲದೆ ಉರ್ದು ಭಾಷೆಯಲ್ಲಿ ಶ್ರೀಮಂತ ಸಾಹಿತ್ಯ ಹೊರಬರುವ ಜೊತೆಗೆ ಹೆಚ್ಚು-ಹೆಚ್ಚು ವಿಚಾರ ಸಂಕಿರಣಗಳಾಬೇಕು ಎಂದರು.

ಈ ವೇಳೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾದ ಮನೋಜ್ ಜೈನ್, ಕರ್ನಾಟಕ ಉರ್ದು ಅಕಾಡೆಮಿಯ ರಿಜಿಸ್ಟರ್ ಆದ ಡಾ. ಮಾಜುದ್ದಿನ್ ಖಾನ್, ಲೇಕಖರಾದ ಡಾ. ಅಜಯ್ ಕುಮಾರ್ ಸಿಂಗ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

 

Share. Facebook Twitter WhatsApp Pinterest LinkedIn Tumblr Telegram Email

Related Posts

“ಮತ್ತೆ ಘರ್ಜಿಸಲಿದೆ ಕರ್ನಾಟಕ”: ಹೊಸ ಕ್ಯಾಂಪೇನ್ ಲೋಗೊ ಬಿಡುಗಡೆ ಮಾಡಿದ ಕಾಂಗ್ರೆಸ್

March 29, 2023

Karnataka Assembly Election: ಕರ್ನಾಟಕ ಮತಹಬ್ಬಕ್ಕೆ ಮುಹೂರ್ತ ಫಿಕ್ಸ್..! ಮೇ 10 ಕ್ಕೆ ಮತದಾನ, 13ಕ್ಕೆ ಫಲಿತಾಂಶ

March 29, 2023

Bangalore: ಶ್ರೀ ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್’ಗೆ ED ಶಾಕ್..!

March 29, 2023

JDS ಸರಕಾರ ಬಂದರೆ ಅಡುಗೆ ಅನಿಲ ಸಿಲಿಂಡರ್ ಗೆ 50% ಸಬ್ಸಿಡಿ: ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

March 29, 2023

Bangalore: ಹನಿ ಟ್ರ್ಯಾಪ್ ಮೂಲಕ ಸುಲಿಗೆ ಮಾಡುತಿದ್ದ ಆರೋಪಿಗಳು ಪೊಲೀಸರ ಅತಿಥಿ

March 29, 2023

Karnataka Assembly Elections 2023: ಇಂದು ಕರ್ನಾಟಕ ರಾಜಕೀಯ ಕುರುಕ್ಷೇತ್ರಕ್ಕೆ ಮೂಹೂರ್ತ ಫಿಕ್ಸ್..!

March 29, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.