PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಓಲಾ ಶೇರಿಂಗ್, ಉಬರ್ ಪೂಲಿಂಗ್‌ʼಗೆ ಅವಕಾಶ ನೀಡಲು ಸಂಸದರ ಪಟ್ಟು: ಕೆರಳಿದ ಖಾಸಗಿ ಸಾರಿಗೆ ಚಾಲಕರು

October 2, 2023

BMTC ನೌಕರರಿಗೆ ಗುಡ್ ನ್ಯೂಸ್: ಡಿಪೋಗಳಲ್ಲೇ ಊಟ ತಿಂಡಿ ಒದಗಿಸುವ ಕ್ಯಾಂಟೀನ್‌ ಆರಂಭ!

October 2, 2023

ಗಾಂಧಿಜೀ ಅವರ ಕನಸಾದ ಸ್ವಚ್ಛ ಭಾರತ ಕನಸನ್ನ ನನಸು ಮಾಡಬೇಕಿದೆ: ಗ್ರಾ.ಪಂ.ಅಧ್ಯಕ್ಷ ಅಶೋಕ್

October 2, 2023
Facebook Twitter Instagram
Monday, October 2
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ‘ಆಸ್ಕರ್’ ಪ್ರಶಸ್ತಿಗಾಗಿ 80 ಕೋಟಿ ಖರ್ಚು ಮಾಡಿದ ರಾಜಮೌಳಿ : ನಿರ್ದೇಶಕ ತಮ್ಮಾರೆಡ್ಡಿ ಆರೋಪ
ಚಲನಚಿತ್ರ Prajatv KannadaBy Prajatv KannadaMarch 10, 2023

‘ಆಸ್ಕರ್’ ಪ್ರಶಸ್ತಿಗಾಗಿ 80 ಕೋಟಿ ಖರ್ಚು ಮಾಡಿದ ರಾಜಮೌಳಿ : ನಿರ್ದೇಶಕ ತಮ್ಮಾರೆಡ್ಡಿ ಆರೋಪ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಈ ಬಾರಿಯ ಆಸ್ಕರ್ ಪ್ರಶಸ್ತಿ ಸಾಕಷ್ಟು ಕುತೂಹಲ ಮೂಡಿಸಿದೆ. ಅದರಲ್ಲೂ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾ ಗೆದ್ದೇ ಗೆಲ್ಲುತ್ತೇವೆ ಎನ್ನುವ ಧಾವಂತದಲ್ಲಿದೆ. ಈ ಪ್ರಶಸ್ತಿಯಲ್ಲಿ ಭಾಗಿಯಾಗಲು ಹಲವು ನಿಯಮಗಳಿದ್ದು ಆ ಎಲ್ಲ ನಿಯಮಗಳನ್ನು ಪೂರೈಸಿ, ಇದೀಗ ಅಂತಿಮ ಹಂತವನ್ನೂ ಅದು ತಲುಪಿದೆ.

ಮಾರ್ಚ್ 12ಕ್ಕೆ ಪ್ರಶಸ್ತಿ ಘೋಷಣೆ ಮತ್ತು ಪ್ರದಾನ ಸಮಾರಂಭವೂ ನಡೆಯಲಿದ್ದು, ಈ ವೇದಿಕೆಯ ಮೇಲೆ ಆರ್.ಆರ್.ಆರ್ ಚಿತ್ರದ ನಾಯಕರಾದ ಜ್ಯೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ‘ನಾಟು ನಾಟು’ ಗೀತೆಗೆ ಹೆಜ್ಜೆ ಹಾಕಲಿದ್ದಾರೆ. ಈ ಹಾಡು ಅಂತಿಮ ಸುತ್ತಿಗೆ ಆಯ್ಕೆಯೂ ಆಗಿದೆ.

ಆದರೆ ಚಿತ್ರತಂಡದ ವಿರುದ್ಧ ತೆಲುಗಿನ ಹಿರಿಯ ನಿರ್ದೇಶಕ ತಮ್ಮಾರೆಡ್ಡಿ ಕಿಡಿಕಾರಿದ್ದಾರೆ. ಆಸ್ಕರ್ ಪ್ರಶಸ್ತಿಯನ್ನು ಪಡೆಯಲೆಂದು ಆರ್.ಆರ್.ಆರ್ ಚಿತ್ರದ ನಿರ್ದೇಶಕ ರಾಜಮೌಳಿ ಬರೋಬ್ಬರಿ 80 ಕೋಟಿ ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಮೊತ್ತದಲ್ಲಿ ತಾವು ಹತ್ತು ಸಿನಿಮಾಗಳನ್ನು ತಯಾರಿಸುತ್ತಿದ್ದೆ ಎಂದಿದ್ದಾರೆ.

‘ನಾನು ಆರೋಪ ಮಾಡುತ್ತಿಲ್ಲ. ನನಗೆ ಗೊತ್ತಿರುವವರೇ ಹೇಳಿರುವಂತೆ ಆಸ್ಕರ್ ಪ್ರಶಸ್ತಿಗಾಗಿ ರಾಜಮೌಳಿ ಮತ್ತು ತಂಡ ನೀರಿನಂತೆ ಹಣ ಖರ್ಚು ಮಾಡಿದ್ದಾರೆ. ಎಂಬತ್ತು ಕೋಟಿ ಖರ್ಚಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲಿ ಸಿನಿಮಾ ಬಿಡುಗಡೆ, ಪ್ರಚಾರ, ತಂಡದ ಖರ್ಚು ಮತ್ತು ಆಸ್ಕರ್ ಪ್ರಶಸ್ತಿಗಾಗಿ ಮಾಡಬೇಕಾದ ಖರ್ಚು ಹೀಗೆ ಕೋಟಿ ಕೋಟಿ ಸುರಿದಿದ್ದಾರೆ. ಇಷ್ಟು ಹಣ ಖರ್ಚು ಮಾಡಿ ಪ್ರಶಸ್ತಿ ಪಡೆಯಬೇಕಾ?’ ಎಂದು ಅವರು ತಮ್ಮಾರೆಡ್ಡಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಕನ್ನಡದ ಕೆಜಿಎಫ್ 2 ಚಿತ್ರಕ್ಕೆ ನೂರು ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಆಸ್ಕರ್ ಪ್ರಶಸ್ತಿಗಾಗಿ ಆರ್.ಆರ್.ಆರ್ ಎಂಬತ್ತು ಕೋಟಿ ಖರ್ಚು ಮಾಡಿದ್ದಾರೆ. ಇಪ್ಪತ್ತು ಕೋಟಿ ಸೇರಿಸಿದ್ದರೆ ಮತ್ತೊಂದು ಕೆಜಿಎಫ್ ಮಾದರಿಯ ಚಿತ್ರ ಮಾಡಬಹುದಿತ್ತು ಎಂದು ತಮ್ಮಾರೆಡ್ಡಿ ಲೇವಡಿ ಮಾಡಿದ್ದಾರೆ.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ದೊಡ್ಮನೆ ಆಟಕ್ಕೆ ಎಂಟ್ರಿ ಬಗ್ಗೆ ಮೇಘಾ ಶೆಟ್ಟಿ ಕೊಟ್ಟ ಉತ್ತರವೇನು?

October 2, 2023

ಅಕ್ಟೋಬರ್ 3ಕ್ಕೆ ವಿಚಾರಣೆಗೆ ಬರುವಂತೆ ನಟ ನಾಗಭೂಷಣ್‌ʼಗೆ ನೋಟಿಸ್!

October 2, 2023

’ಶುಗರ್ ಫ್ಯಾಕ್ಟರಿ’ಯಲ್ಲಿ ಡಾರ್ಲಿಂಗ್ ಕೃಷ್ಣ ಮಿಂಚಿಂಗ್…ಯಾವಾಗ ರಿಲೀಸ್ ಆಗ್ತಿದೆ ಸಿನಿಮಾ?

September 30, 2023

ಸಂಯುಕ್ತಾ ಬೋಲ್ಡ್​ ಡಾನ್ಸ್​​, ನೆಟ್ಟಿಗರ ತರಾಟೆ – ಡ್ಯಾನ್ಸರ್ ಕಿಶನ್ ರಿಯಾಕ್ಷನ್ ಹೀಗಿತ್ತು!

September 30, 2023

‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಕಲೆಕ್ಷನ್ ಎಷ್ಟು ಗೊತ್ತಾ: ಕೇಳಿದ್ರೆ ಅಬ್ಬಾ ಅನ್ಸುತ್ತೆ!

September 30, 2023

ರಾಕಿಭಾಯ್ ಅಭಿಮಾನಿಗಳಿಗೆ ಗುಡ್ ನ್ಯೂಸ್ – ಸಲಾರ್ ರಿಲೀಸ್ ಬಳಿಕ‌ ಕೆಜಿಎಫ್-3 ಕೆಲಸ ಶುರು

September 30, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.