PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Sunday, September 24
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » IND vs AUS: ಆಟಕ್ಕೆ ಮತ್ತೆ ಎಂಟ್ರಿ ಕೊಟ್ಟ ರೋಹಿತ್, 2ನೇ ODIಗೆ ಭಾರತ ತಂಡದಲ್ಲಿ 2 ಬದಲಾವಣೆ ನಿರೀಕ್ಷೆ!
ಕ್ರೀಡೆ Prajatv KannadaBy Prajatv KannadaMarch 19, 2023

IND vs AUS: ಆಟಕ್ಕೆ ಮತ್ತೆ ಎಂಟ್ರಿ ಕೊಟ್ಟ ರೋಹಿತ್, 2ನೇ ODIಗೆ ಭಾರತ ತಂಡದಲ್ಲಿ 2 ಬದಲಾವಣೆ ನಿರೀಕ್ಷೆ!

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ವಿಶಾಖಪಟ್ಟಣಂ: ಆಸ್ಟ್ರೇಲಿಯಾ ವಿರುದ್ಧ ಮೊದಲನೇ ಪಂದ್ಯದಲ್ಲಿ ಗೆಲುವು ಪಡೆಯುವ ಮೂಲಕ ಭಾರತ ತಂಡ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇದೀಗ ಉಭಯ ತಂಡಗಳು ಭಾನುವಾರ ಇಲ್ಲಿನ ಆಂಧ್ರ ಕ್ರಿಕೆಟ್‌ ಅಸೋಸಿಯೇಷನ್‌ನಲ್ಲಿ ಮೈದಾನದಲ್ಲಿ ನಡೆಯುವ ಎರಡನೇ ಪಂದ್ಯಕ್ಕೆ ಸಜ್ಜಾಗುತ್ತಿವೆ.

ಕೌಟುಂಬಿಕ ಕಾರಣಗಳಿಂದ ರೋಹಿತ್‌ ಶರ್ಮಾ ಅವರು ಮೊದಲನೇ ಏಕದಿನ ಪಂದ್ಯಕ್ಕೆ ಅಲಭ್ಯರಾಗಿದ್ದರು. ಈ ಹಿನ್ನೆಲೆಯಲ್ಲಿ ಹಾರ್ದಿಕ್‌ ಪಾಂಡ್ಯ ತಂಡವನ್ನು ಮುನ್ನಡೆಸುವ ಮೂಲಕ ಯಶಸ್ವಿಯಾಗಿದ್ದರು. ಇದೀಗ ಎರಡನೇ ಪಂದ್ಯಕ್ಕೆ ರೋಹಿತ್‌ ಶರ್ಮಾ ಮರಳುವ ಮೂಲಕ ತಂಡದ ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಮೊಹಮ್ಮದ್‌ ಶಮಿ ಹಾಗೂ ಮೊಹಮ್ಮದ್ ಸಿರಾಜ್‌ ಬೌಲಿಂಗ್‌ನಲ್ಲಿ ಮಿಂಚಿನ ದಾಳಿ ಹಾಗೂ ಕೆ.ಎಲ್‌ ರಾಹುಲ್‌ ಹಾಗೂ ರವೀಂದ್ರ ಜಡೇಜಾ ಅದ್ಭುತ ಬ್ಯಾಟಿಂಗ್‌ ಸಹಾಯದಿಂದ ಟೀಮ್‌ ಇಂಡಿಯಾ, ಆರಂಭಿಕ ಪಂದ್ಯದಲ್ಲಿ ಐದು ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತ್ತು. ಶಮಿ ಹಾಗೂ ಸಿರಾಜ್‌ ತಲಾ ಮೂರು ವಿಕೆಟ್‌ಗಳನ್ನು ಪಡೆದುಕೊಂಡಿದ್ದರು. ಆ ಮೂಲಕ ಆಸ್ಟ್ರೇಲಿಯಾ ತಂಡವನ್ನು 188ಕ್ಕೆ ಆಲ್‌ಔಟ್‌ ಮಾಡುವಲ್ಲಿ ಸಫಲರಾಗಿದ್ದರು.

ಬಳಿಕ ಗುರಿ ಹಿಂಬಾಲಿಸಿದ್ದ ಭಾರತ ತಂಡ ಆರಂಭದಲ್ಲಿಯೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ, ಆರನೇ ವಿಕೆಟ್‌ಗೆ ಜೊತೆಯಾದ ಕೆಎಲ್‌ ರಾಹುಲ್‌ ಹಾಗೂ ರವೀಂದ್ರ ಜಡೇಜಾ ಕ್ರಮವಾಗಿ 75* ಹಾಗೂ 45* ರನ್‌ ಗಳಿಸುವ ಜೊತೆಗೆ 108 ರನ್‌ಗಳ ಜೊತೆಯಾಟವನ್ನು ಆಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಬೌಲಿಂಗ್‌ನಲ್ಲಿಯೂ ಎರಡು ವಿಕೆಟ್‌ ಪಡೆದಿದ್ದ ರವೀಂದ್ರ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

ಇಶಾನ್‌ ಕಿಶನ್‌ ಔಟ್‌

ರೋಹಿತ್‌ ಶರ್ಮಾ ಅನುಪಸ್ಥಿತಿಯಲ್ಲಿ ಮೊದಲನೇ ಏಕದಿನ ಪಂದ್ಯದಲ್ಲಿ ಇನಿಂಗ್ಸ್ ಆರಂಭಿಸಿದ್ದ ಇಶಾನ್‌ ಕಿಶನ್‌ ಎರಡನೇ ಪಂದ್ಯದಲ್ಲಿ ತಮ್ಮ ಸ್ಥಾನವನ್ನು ನಾಯಕನಿಗೆ ಬಿಟ್ಟುಕೊಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಶುಭಮನ್ ಗಿಲ್‌ ಹಾಗೂ ರೋಹಿತ್‌ ಶರ್ಮಾ ಇನಿಂಗ್ಸ್ ಆರಂಭಿಸಲಿದ್ದಾರೆ. ಕಳೆದ ವರ್ಷ ಬಾಂಗ್ಲಾದೇಶ ವಿರುದ್ಧ ದ್ವಿಶತಕ ಸಿಡಿಸಿದ್ದ ಇಶಾನ್‌ ಕಿಶನ್‌ ಆರಂಭಿಕ ಪಂದ್ಯದಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದರು. ಟೆಸ್ಟ್‌ ಸರಣಿಯಲ್ಲಿ ಶತಕ ಸಿಡಿಸಿದ್ದ ರೋಹಿತ್‌ ಶರ್ಮಾ ಅದೇ ಲಯವನ್ನು ಈ ಪಂದ್ಯದಲ್ಲಿಯೂ ಮುಂದುವರಿಸಲು ಎದುರು ನೋಡುತ್ತಿದ್ದಾರೆ.

 

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಭಾರತೀಯ ಏಷ್ಯನ್ ಗೇಮ್ಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಶಫಾಲಿ ವರ್ಮಾ

September 23, 2023

ಟೀಮ್ ಇಂಡಿಯಾ ಆಯ್ಕೆ ಮಾಡಿದ ಶ್ರೀಲಂಕಾ ದಿಗ್ಗಜ ಅರ್ಜುನ ರಣತುಂಗ

September 23, 2023

ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಜಯ

September 23, 2023

ಮಳೆಯಿಂದ ಭಾರತ-ಮಲೇಷ್ಯಾ ಪಂದ್ಯ ರದ್ದು, ರನ್ ರೇಟ್ ಆಧಾರಿಸಿ ಕ್ವಾರ್ಟರ್ ಫೈನಲ್‍ಗೆ ಟೀಂ ಇಂಡಿಯಾ

September 22, 2023

ಈ ಬಾರಿ ವಿಶ್ವಕಪ್‌ ಗೆಲ್ಲಲು ಕ್ರಿಕೆಟಿಗರ ಕಸರತ್ತು ಹೇಗಿದೆ ಗೊತ್ತಾ?

September 22, 2023

ಈ ಸಲ ವಿಶ್ವಕಪ್‌ ಸಿಗೋದು ಇವರಿಂದಲೇ: ಕ್ರಿಕೆಟ್‌ ದಿಗ್ಗಜರ ವಿಶ್ವಾಸ: ಯಾರಿದು?

September 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.