PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Bombay jayashree: ಪ್ರಜ್ಞಾಹೀನ ಸ್ಥಿತಿಯಲ್ಲಿ ಖ್ಯಾತ ಗಾಯಕಿ ಬಾಂಬೆ ಜಯಶ್ರೀ ಪತ್ತೆ

March 24, 2023

Ajith Kumar: ತಮಿಳು ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಂ ನಿಧನ

March 24, 2023

ಹಿಂಡೆನ್ ಬರ್ಗ್ ವರದಿ ಬಳಿಕ ಜಾಕ್ ಡೋರ್ಸಿ ಸಂಪತ್ತಿನ ಮೌಲ್ಯ ಭಾರೀ ಕುಸಿತ

March 24, 2023
Facebook Twitter Instagram
Friday, March 24
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » 10 ಕೆಜಿ ಅಕ್ಕಿ ಕೊಟ್ಟಿದ್ದು ಕೇಂದ್ರ ಸರ್ಕಾರ, ಸಿದ್ದರಾಮಯ್ಯ ಕೊಟ್ಟಿದ್ದು 3 ರೂ. ಗೋಣಿಚೀಲ – ವರ್ತೂರು ಪ್ರಕಾಶ್
ಜಿಲ್ಲೆ Prajatv KannadaBy Prajatv KannadaMarch 6, 2023

10 ಕೆಜಿ ಅಕ್ಕಿ ಕೊಟ್ಟಿದ್ದು ಕೇಂದ್ರ ಸರ್ಕಾರ, ಸಿದ್ದರಾಮಯ್ಯ ಕೊಟ್ಟಿದ್ದು 3 ರೂ. ಗೋಣಿಚೀಲ – ವರ್ತೂರು ಪ್ರಕಾಶ್

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಕೋಲಾರ: ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಾಗ 10 ಕೆಜಿ ಅಕ್ಕಿ ಕೊಟ್ಟೆ ಅಂತ ಬುರುಡೆ ಬಿಡುತ್ತಿದ್ದಾರೆ. ಅಕ್ಕಿ ಕೊಟ್ಟಿದ್ದು ಕೇಂದ್ರ ಸರ್ಕಾರ. ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊಟ್ಟಿದ್ದು ಮೂರು ರೂಪಾಯಿ ಗೋಣಿಚೀಲ. ಈ ದೇಶದ ರೈತರ ಬೆನ್ನೆಲುಬಾಗಿ ನಿಂತಿರುವುದು ಭಾರತೀಯ ಜನತಾ ಪಕ್ಷ ಮಾತ್ರ. ಹಾಗಾಗಿ ಈ ದೇಶದ ಉಳಿವಿಗಾಗಿ, ಈ ದೇಶದ ರೈತರ ನೆಮ್ಮದಿಗಾಗಿ ತಾಲೂಕಿನ ಜನತೆ ಭಾರತೀಯ ಜನತಾ ಪಕ್ಷಕ್ಕೆ ಮತ ಕೊಡಬೇಕು ಎಂದು ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಅವರು ವೇಮಗಲ್ ವ್ಯಾಪ್ತಿಯ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು. ಕೋಲಾರ ತಾಲೂಕಿನ ವೇಮಗಲ್ ಪಟ್ಟಣ ವ್ಯಾಪ್ತಿಯ ಬೆಟ್ಟಹೊಸಪುರ ಗ್ರಾಮದಲ್ಲಿ ಸ್ವಾಭಿಮಾನ ಸಂಕಲ್ಪ ಕಾರ್ಯಕ್ರಮವು ಅದ್ದೂರಿಯಾಗಿ ನೇರವೇರಿತು. ಬೆಟ್ಟಹೊಸಪುರ ಗ್ರಾಮದಲ್ಲಿ ಪಟಾಕಿ ಸಿಡಿಸಿ ಬೃಹತ್ ಅಕಾರದ ಆಪಲ್ ಹಾರವನ್ನು ಕ್ರೈನ್ ಮುಖಾಂತರ ಹಾಕುವುದರ ಮೂಲಕ ಮಾಜಿ ಸಚಿವ ವರ್ತೂರ್ ರವರನ್ನು ಸ್ವಾಗತಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ವರ್ತೂರು ಪ್ರಕಾಶ್ ಅವರು, ರೈತರಿಗೆ ಪ್ರಧಾನಿ ಮೋದಿಯವರು ಕಿಸಾನ್ ಸನ್ಮಾನ ಯೋಜನೆ ಅಡಿಯಲ್ಲಿ ವರ್ಷಕ್ಕೆ ಹತ್ತು ಸಾವಿರ ನೀಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಇದುವರೆಗೂ ಅಂತಹ ಯೋಜನೆಗಳನ್ನು ಜಾರಿಗೆ ತರಲೇ ಇಲ್ಲ. ರೈತರ ಪರ ಕಾಳಜಿ ವಹಿಸಲೇ ಇಲ್ಲ ಎಂದರು.

ದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್ ಸರ್ಕಾರ ಏನು ಮಾಡಿದೆ?

ಕೇಂದ್ರ ಸರ್ಕಾರ ಈ ದೇಶದ ದಲಿತರಿಗೆ ಉಚಿತ ವಿದ್ಯುತ್ ನೀಡುತ್ತಿದೆ. ದಲಿತರ ಪರ ಎಂದು ಬೊಬ್ಬೆ ಹೊಡೆಯುವ ಕಾಂಗ್ರೆಸ್ ಪಕ್ಷ ಯಾಕೆ ಮಾಡಲಿಲ್ಲ? ಕಾಂಗ್ರೆಸ್ ಪಕ್ಷದ ಅಭಿವೃದ್ಧಿಗಾಗಿ ದೇಶದ ನಾಗರಿಕರನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದರೆ ದೇಶ ಅಭಿವೃದ್ಧಿ ಹೊಂದುವುದಿಲ್ಲ. ನಾನು ಹತ್ತು ವರ್ಷಗಳ ಕಾಲ ಶಾಸಕನಾಗಿದ್ದ ವೇಳೆ ಕೋಲಾರ ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದೆ. ಆದರೆ ಕಾರಣಾಂತರಗಳಿಂದ ಸೋತು ಹೋದೆ. ಐದು ವರ್ಷಗಳಿಂದ ಈಗಿನ ಶಾಸಕರು ಅಭಿವೃದ್ಧಿ ಮಾಡದೆ ಕಾಲ ಕಳೆದು ಈಗ ಮತ ಕೇಳಲು ನಿಮ್ಮ ಬಳಿ ಬಂದಾಗ ತಕ್ಕ ಶಾಸ್ತಿ ಮಾಡಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬೆಗ್ಲಿ ಸೂರ್ಯ ಪ್ರಕಾಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ರೂಪಶ್ರೀ ಮಂಜುನಾಥ್, ಅರುಣ್ ಪ್ರಸಾದ್, ತಾಲೂಕು ಅಧ್ಯಕ್ಷ ಸಿಡಿ ರಾಮಚಂದ್ರಗೌಡ, ಬೆಟ್ಟಹೊಸಪುರ ಗ್ರಾಮದ ಮುಖಂಡರಾದ ದೇವರಾಜ್, ಮುನಿರಾಜು, ಚಂದ್ರಪ್ಪ, ಹರೀಶ, ನಾಗೇಶ್, ಎಸ್ ಮಂಜುನಾಥ್, ಈರಪ್ಪ, ಹಾಗೂ ಉಪಸ್ಥಿತರಿದ್ದರು.

 

Share. Facebook Twitter WhatsApp Pinterest LinkedIn Tumblr Telegram Email

Related Posts

ದಾಖಲೆ ಇಲ್ಲದೇ ಸಾಗಿಸುತ್ತಿದ್ದ 53 ಲಕ್ಷ ನಗದು ವಶಕ್ಕೆ ಪಡೆದ ಗರಗ ಪೊಲೀಸರು

March 24, 2023

4 ವರ್ಷಗಳ ನಂತ್ರ 100 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ

March 24, 2023

ಯಡಿಯೂರಪ್ಪ ನಿವಾಸದಲ್ಲಿ ಉಪಹಾರ ಸೇವಿಸಿದ ಸಚಿವ ಅಮಿತ್ ಶಾ

March 24, 2023

ಹೆಣ್ಣುಮಕ್ಕಳು ಮೈತ್ರಿ ಮುಟ್ಟಿನ ಕಪ್ ಬಳಕೆ ಮಾಡುವ ಮೂಲಕ ಸ್ವಚ್ಛತೆಗೆ ಆದ್ಯತೆ ನೀಡಿ

March 23, 2023

ಸಿದ್ಧೇಶ್ವರ ರಥೋತ್ಸವಕ್ಕೆ ಹೆಲಿಕ್ಯಾಪ್ಟರ್ ಮೂಲಕ ಪುಷ್ಪಾರ್ಚಣೆ: ಅದ್ದೂರಿಯಾಗಿ ನಡೆದ ಜಾತ್ರಾ ಮಹೋತ್ಸವ

March 23, 2023

ಗ್ರಾಮೀಣ ಕ್ರೀಡೆ ಬಗ್ಗೆ ಜನರ ಆಸಕ್ತಿ : ಹೋರಿ ಸ್ಪರ್ಧೆ ನೊಡಲು ಸೇರಿದ ನೂರಾರು ಜನ.

March 23, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.