PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Bombay jayashree: ಪ್ರಜ್ಞಾಹೀನ ಸ್ಥಿತಿಯಲ್ಲಿ ಖ್ಯಾತ ಗಾಯಕಿ ಬಾಂಬೆ ಜಯಶ್ರೀ ಪತ್ತೆ

March 24, 2023

Ajith Kumar: ತಮಿಳು ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಂ ನಿಧನ

March 24, 2023

ಹಿಂಡೆನ್ ಬರ್ಗ್ ವರದಿ ಬಳಿಕ ಜಾಕ್ ಡೋರ್ಸಿ ಸಂಪತ್ತಿನ ಮೌಲ್ಯ ಭಾರೀ ಕುಸಿತ

March 24, 2023
Facebook Twitter Instagram
Friday, March 24
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಸುಳ್ಳು ಹೇಳುವುದು ಕಾಂಗ್ರೆಸ್ಸಿಗರ ಕೆಲಸ, ಅವರ ಗ್ಯಾರಂಟಿ ಕಾರ್ಡ್‌ ನಂಬಬೇಡಿ’- ರಮೇಶ್ ಜಾರಕಿಹೊಳಿ
ಜಿಲ್ಲೆ Prajatv KannadaBy Prajatv KannadaMarch 13, 2023

ಸುಳ್ಳು ಹೇಳುವುದು ಕಾಂಗ್ರೆಸ್ಸಿಗರ ಕೆಲಸ, ಅವರ ಗ್ಯಾರಂಟಿ ಕಾರ್ಡ್‌ ನಂಬಬೇಡಿ’- ರಮೇಶ್ ಜಾರಕಿಹೊಳಿ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಳಗಾವಿ: ಚುನಾವಣೆ ಕಾಲಕ್ಕೆ ಸುಳ್ಳು ಹೇಳುವುದು ಕಾಂಗ್ರೆಸ್ಸಿಗರ ಕೆಲಸವಾಗಿದ್ದು ಅವರು ಘೋಷಿಸಿರುವ ಗ್ಯಾರಂಟಿ ಕಾರ್ಡ್ ನಂಬಬೇಡಿ ಎಂದು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಅಂಕಲಗಿಯಲ್ಲಿ ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದಿಂದ ಭಾನುವಾರ ಹಮ್ಮಿಕೊಂಡ ಕುಂದರನಾಡು ಬೃಹತ್‌ ಬಿಜೆಪಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಚುನಾವಣೆ ಕಾಲಕ್ಕೆ ಸುಳ್ಳು ಹೇಳುವುದು ಕಾಂಗ್ರೆಸ್ಸಿಗರ ಕೆಲಸ. ಕಾಂಗ್ರೆಸ್ಸಿನ ಸ್ವಯಂ ಘೋಷಿತ ನಾಯಕರು ಗ್ಯಾರಂಟಿ ಕಾರ್ಡ್‌ ನೀಡುತ್ತಿದ್ದಾರೆ. ಅವರನ್ನು ಯಾವ ಕಾರಣಕ್ಕೂ ಎಂದಿಗೂ ನಂಬಬೇಡಿ ಎಂದರು.

ಇದೇವೇಳೆ ಜನರಿಗೆ ಸುಳ್ಳು ಹೇಳಲು ಹೋಗಬೇಡಿ ಎಂದು ನಮ್ಮ ನಾಯಕರು ಈಗಾಗಲೇ ಸೂಚನೆ ನೀಡಿದ್ದಾರೆ. ನಮ್ಮ ತತ್ವ ಸಿದ್ಧಾಂತಗಳನ್ನು ಮೀರಿ ಎಂದಿಗೂ ನಾವು ಜನರಿಗೆ ಸುಳ್ಳು ಹೇಳುವುದು ಬೇಡ. ಇದು ನಮ್ಮ ಪಕ್ಷದ ನಿಲುವಾಗಿದೆ ಎಂದು ಹೇಳಿದರು.

ನನ್ನ ವಿರುದ್ಧ ಕಾಂಗ್ರೆಸ್ ಅಪಪ್ರಚಾರ

”ನನ್ನ ವಿರುದ್ಧ ಕಾಂಗ್ರೆಸ್‌ ಅಪಪ್ರಚಾರ ಮಾಡುತ್ತಿದೆ. ನಾನು ಎಂದಿಗೂ ಯಾವುದೇ ಸಮಾಜದ ವಿರುದ್ಧ ಇಲ್ಲ. ನನಗೆ ಜಾತಿ ಭೇದ ಎನ್ನುವುದು ಗೊತ್ತಿಲ್ಲ. ಚುನಾವಣೆ ಬಂದಾಗ ಹೀಗೆ ನನ್ನ ವಿರುದ್ಧ ಕೆಲವರನ್ನು ಎತ್ತಿಕೊಟ್ಟುವುದೇ ಕಾಂಗ್ರೆಸ್‌ನ ಕೆಲಸವಾಗಿದೆ”, ಎಂದು ಆರೋಪ ಮಾಡಿದರು. ಇನ್ನು ರಾಜ್ಯ ಹಾಗೂ ಕೇಂದ್ರಗಳಲ್ಲಿ ಮತ್ತೆ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಚುಕ್ಕಾಣಿ ಹಿಡಿದು ಭಾರತವನ್ನು ವಿಶ್ವದ ದೊಡ್ಡಣ್ಣನಾಗಿ ಮಾಡುವುದು ನಿಶ್ಚಿತ ಎಂದು ಅವರು ಅಭಿಪ್ರಾಯಪಟ್ಟರು.

ಬಿಜೆಪಿ 140 ಸ್ಥಾನ ಗೆಲ್ಲಲೇಬೇಕು

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 140 ಸ್ಥಾನ ಸಿಗಲೇಬೇಕು. ಮುಸಲ್ಮಾನರು, ಲಿಂಗಾಯತರು, ಹಿಂದುಳಿದವರು ಸೇರಿದಂತೆ ಎಲ್ಲವರ್ಗದವರು ಮುಂದಿನ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕು. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು.

ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಟಿ.ಆರ್‌. ಕಾಗಲ, ಬಿಜೆಪಿ ಮುಖಂಡ ಪ್ರಲ್ಹಾದ ಹೊಳೆಯಾಚೆ ಪ್ರಸ್ತಾವಿಕವಾಗಿ ಮಾತನಾಡಿದರು. ಮಾಜಿ ಶಾಸಕರಾದ ಶಶಿಕಾಂತ ನಾಯ್ಕ, ಎಂ.ಎಲ್‌. ಮುತ್ತೆನ್ನವರ, ಗೋಕಾಕ ವಿಧಾನಸಭಾ ಮತಕ್ಷೇತ್ರ ಬಿಜೆಪಿ ಉಸ್ತುವಾರಿ ಗುರುಪಾದ ಕಳ್ಳಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಕಾರ‍್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ, ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಕೆಎಮ್‌ಎಫ್‌ ನಿರ್ದೇಶಕ ಅಮರನಾಥ ಜಾರಕಿಹೊಳಿ, ಭೀಮಗೌಡ ಪೋಲಿಸಗೌಡರ ಸೇರಿದಂತೆ ಅನೇಕ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಮಾವೇಶಕ್ಕೂ ಮುಂಚೆ ಅಂಕಲಗಿ ಪಟ್ಟಣದ ಬಸ್‌ ನಿಲ್ದಾಣದಿಂದ ಶ್ರೀ ಅಡವಿಸಿದ್ಧೇಶ್ವರ ದೇವಸ್ಥಾನದ ಶಾಲಾ ಆವರಣದವರೆಗೆ ಶಾಸಕ ರಮೇಶ ಜಾರಕಿಹೊಳಿ ಅವರನ್ನು ತೆರೆದ ಜೀಪ್‌ನಲ್ಲಿ ವಿವಿಧ ವಾದ್ಯ ಮೇಳಗಳೊಂದಿಗೆ ಮೆರವಣಿಗೆ ಮೂಲಕ ಕರೆ ತರಲಾಯಿತು.

Share. Facebook Twitter WhatsApp Pinterest LinkedIn Tumblr Telegram Email

Related Posts

ದಾಖಲೆ ಇಲ್ಲದೇ ಸಾಗಿಸುತ್ತಿದ್ದ 53 ಲಕ್ಷ ನಗದು ವಶಕ್ಕೆ ಪಡೆದ ಗರಗ ಪೊಲೀಸರು

March 24, 2023

4 ವರ್ಷಗಳ ನಂತ್ರ 100 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ

March 24, 2023

ಯಡಿಯೂರಪ್ಪ ನಿವಾಸದಲ್ಲಿ ಉಪಹಾರ ಸೇವಿಸಿದ ಸಚಿವ ಅಮಿತ್ ಶಾ

March 24, 2023

ಹೆಣ್ಣುಮಕ್ಕಳು ಮೈತ್ರಿ ಮುಟ್ಟಿನ ಕಪ್ ಬಳಕೆ ಮಾಡುವ ಮೂಲಕ ಸ್ವಚ್ಛತೆಗೆ ಆದ್ಯತೆ ನೀಡಿ

March 23, 2023

ಸಿದ್ಧೇಶ್ವರ ರಥೋತ್ಸವಕ್ಕೆ ಹೆಲಿಕ್ಯಾಪ್ಟರ್ ಮೂಲಕ ಪುಷ್ಪಾರ್ಚಣೆ: ಅದ್ದೂರಿಯಾಗಿ ನಡೆದ ಜಾತ್ರಾ ಮಹೋತ್ಸವ

March 23, 2023

ಗ್ರಾಮೀಣ ಕ್ರೀಡೆ ಬಗ್ಗೆ ಜನರ ಆಸಕ್ತಿ : ಹೋರಿ ಸ್ಪರ್ಧೆ ನೊಡಲು ಸೇರಿದ ನೂರಾರು ಜನ.

March 23, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.