ಬೆಂಗಳೂರು: ಕಾಂಗ್ರೆಸ್ ನೇತೃತ್ವದ ಸರ್ಕಾರವು ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿದ್ದು ಈಗ ಚಕ್ರವರ್ತಿ ಸೂಲಿಬೆಲೆ ಅವರ ‘ತಾಯಿ ಭಾರತೀಯ ಅಮರಪುತ್ರರು’ ಪಠ್ಯವನ್ನು ಕೈ ಬಿಡಲಾಗಿದೆ.
ಪರಿಷ್ಕೃತ ಪಠ್ಯ ಪುಸ್ತಕದ ಬಗ್ಗೆ ಮಾಹಿತಿ ಹಂಚಿಕೊಂಡ ಕಾಂಗ್ರೆಸ್ ಸರ್ಕಾರ 2022-23 ನೇ ಸಾಲಿನಲ್ಲಿ 1 ರಿಂದ 10ನೇ ತರಗತಿ ಕನ್ನಡ ಭಾಷಾ ಮತ್ತು 6 ರಿಂದ 10ನೇ ತರಗತಿಗಳ ಸಮಾಜ ವಿಜ್ಞಾನ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿ, 2023-24ನೇ ಶೈಕ್ಷಣಿಕ ಸಾಲಿಗೆ ಮುದ್ರಿಸಿ ಎಲ್ಲಾ ಶಾಲೆಗಳಿಗೆ ಸರಬರಾಜು ಮಾಡಲಾಗಿದೆ ಎಂದು ತಿಳಿಸಿದೆ.
ಬಿಜೆಪಿ ಅವಧಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲಾಗಿತ್ತು. ಅದನ್ನು ಕಾಂಗ್ರೆಸ್ ಸರ್ಕಾರ ಮತ್ತೆ ಪರಿಷ್ಕರಿಸಿದೆ. 10 ನೇ ತರಗತಿಯ ಕನ್ನಡ ಭಾಷಾ ವಿಷಯದಲ್ಲಿದ್ದ ಚಕ್ರವರ್ತಿ ಸೂಲಿಬೆಲೆ ಪಠ್ಯ ಕೈಬಿಟ್ಟಿದೆ. ಜೊತೆಗೆ ಕನ್ನಡದಲ್ಲಿ 9 ಹೊಸ ಪಠ್ಯಗಳನ್ನು ಸೇರ್ಪಡೆ ಮಾಡಿದೆ. ಸಮಾಜ ವಿಜ್ಞಾನದಲ್ಲಿ 9 ಪಠ್ಯಗಳ ಪರಿಷ್ಕರಣೆ ಮತ್ತು ತಿದ್ದುಪಡಿ ಮಾಡಲಾಗಿದೆ.