PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Monday, September 25
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » Election Ticket Fight: ಕಾಂಗ್ರೆಸ್‍ನಲ್ಲಿ ಟಿಕೆಟ್ ಫೈಟ್- ದೆಹಲಿಯಲ್ಲಿ ದಲಿತ ಎಡ ನಾಯಕರ ಠಿಕಾಣಿ
ರಾಷ್ಟ್ರೀಯ Prajatv KannadaBy Prajatv KannadaMarch 15, 2023

Election Ticket Fight: ಕಾಂಗ್ರೆಸ್‍ನಲ್ಲಿ ಟಿಕೆಟ್ ಫೈಟ್- ದೆಹಲಿಯಲ್ಲಿ ದಲಿತ ಎಡ ನಾಯಕರ ಠಿಕಾಣಿ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆ (Vidhanasabha Election) ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್‍ (Congres) ನಲ್ಲಿ ಟಿಕೆಟ್ ಫೈಟ್ ಜೋರಾಗಿದೆ. ದಲಿತ ಎಡ ಸಮುದಾಯಕ್ಕೆ 15 ಕ್ಷೇತ್ರಗಳಲ್ಲಿ ಟಿಕೆಟ್ ನೀಡುವಂತೆ ಸಮುದಾಯದ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ದೆಹಲಿಯಲ್ಲಿ ಠಿಕಾಣಿ ಹಾಕಿದ್ದಾರೆ.

ಮಾಜಿ ಸಂಸದರಾದ ಕೆ.ಹೆಚ್. ಮುನಿಯಪ್ಪ (K H Muniyappa) , ಬಿ.ಎನ್ ಚಂದ್ರಪ್ಪ, ಮಾಜಿ ಸಚಿವ ಹೆಚ್. ಆಂಜನೇಯ (Aanjaneya), ಆರ್.ಬಿ ತಿಮ್ಮಾಪುರ, ಸಂಸದ ಎಲ್. ಹನುಮಂತಯ್ಯ ಎಐಸಿಸಿ ಅಧ್ಯಕ್ಷರ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಭೇಟಿಗೆ ಸಮಯ ಕೇಳಿದ್ದು ಸಂಜೆ 6 ಗಂಟೆಗೆ ಸಭೆ ನಡೆಯುವ ಸಾಧ್ಯತೆಗಳಿದೆ.

ಎಡ ಸಮುದಾಯದ ನಾಯಕರು ಪಾವಗಡ, ದೇವನಹಳ್ಳಿ, ಕೆಜಿಎಫ್, ಹೊಳಲ್ಕೆರೆ, ಶಿವಮೊಗ್ಗ ಗ್ರಾಮಂತರ, ಮಾಯಕೊಂಡ, ಶಿರಹಟ್ಟಿ, ಔರಾದ್, ಲಿಂಗಸ್ಗೂರು ಸೇರಿದಂತೆ 15 ಕ್ಷೇತ್ರಗಳಲ್ಲಿ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಕಳೆದ ಬಾರಿ 11 ಸ್ಥಾನಗಳನ್ನು ನೀಡಿದ್ದು ಈ ಬಾರಿ ಹದಿನೈದಕ್ಕೆ ಏರಿಸಬೇಕು ಎಂದು ಒತ್ತಡ ಹಾಕುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಮಾಜಿ ಸಚಿವ ಹೆಚ್.ಆಂಜನೇಯ, ದೆಹಲಿಯ ಅಕ್ಬರ್ ರಸ್ತೆಯಲ್ಲಿ ಕಾಂಗ್ರೆಸ್ ದೇವಾಲಯ ಇದೆ, ಅಲ್ಲಿ ನಮ್ಮ ಮನವಿಯನ್ನು ಮುಂದಿಡುತ್ತೇವೆ. ಮಾದಿಗ ಸಮುದಾಯದ ರಾಜಕೀಯ ಪ್ರಾತಿನಿಧ್ಯ ಕ್ಷೀಣಿಸುತ್ತಿದೆ. ಸಮುದಾಯದ ರಾಜಕೀಯ ಬಲಪಡಿಸಬೇಕಿದೆ ಸಮುದಾಯದ ನಾಯಕರ ತಂಡ ದೆಹಲಿಗೆ ಬಂದಿದ್ದೇವೆ. ನಮ್ಮ ಅದೃಷ್ಟ ಖರ್ಗೆಯವರು ಅಧ್ಯಕ್ಷರಾಗಿದ್ದಾರೆ. ಅವರಲ್ಲಿ ಮನವಿ ಮಾಡಿ ಅವಕಾಶ ಕೇಳುತ್ತೇವೆ. ಹೆಚ್ಚು ಸೀಟುಗಳನ್ನು ಪಡೆದು ಕಾಂಗ್ರೆಸ್ ಗೆಲ್ಲಿಸುತ್ತೇವೆ. ದೇವನಹಳ್ಳಿಯಲ್ಲಿ ಮುನಿಯಪ್ಪನವರಿಗೆ ಕೇಳುತ್ತಿದ್ದೇವೆ, ಪಾವಗಡ ಬೇಕೆಬೇಕು ಎಂದು ನಾವು ಕೇಳುತ್ತಿದ್ದೇವೆ ಎಂದರು.

ಮಾಜಿ ಸಂಸದ ಬಿ.ಎನ್ ಚಂದ್ರಪ್ಪ (B N Chandrappa) ಮಾತನಾಡಿ, ಟಿಕೆಟ್ ಕೇಳುವ ನಾವು ಮಗು ಇದ್ದ ಹಾಗೆ, ಪಕ್ಷ ತಾಯಿ ಇದ್ದ ಹಾಗೆ. ಮಗು ಅಳದೆ ತಾಯಿ ಹಾಲು ಕುಡಿಸುವುದಿಲ್ಲ. ಹಾಗಾಗಿ ಸಮಯದಾಯದ ಪರ ಮನವಿಗೆ ಬಂದಿದ್ದೇವೆ. ನಮ್ಮ ಸಮುದಾಯವನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು, ನಮ್ಮಗೆ ಟಿಕೆಟ್ ನೀಡುವುದು ಸಾಮಾನ್ಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲು ಸಹಕಾರಿಯಾಗಲಿದೆ ಎಂದು ಹೇಳಿದರು.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಗಂಡು ಮಗುವಿನ ಆಸೆಗೆ ಹೆತ್ತ ತಂದೆಯಿಂದಲೇ ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ..!

September 23, 2023

ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆ ಕಡ್ಡಾಯವಲ್ಲ: ಸುಪ್ರೀಂಗೆ ಚುನಾವಣಾ ಆಯೋಗ ಮಾಹಿತಿ

September 23, 2023

ಭಾರತದ ಸಂಸ್ಥೆಗಳನ್ನು RSS ವಶಪಡಿಸಿಕೊಳ್ಳಲು ಬಿಡುವುದಿಲ್ಲ: ರಾಹುಲ್ ಗಾಂಧಿ

September 23, 2023

4 ವರ್ಷಗಳಿಂದ ಗೃಹ ಬಂಧನದಲ್ಲಿದ್ದ ಮಿರ್ವೈಜ್ ಉಮರ್ ಫಾರೂಕ್ ಬಿಡುಗಡೆ

September 23, 2023

ಕೇಸು ಹಿಂಪಡೆಯಲು ತಿರಸ್ಕರಿಸಿದ್ದಕ್ಕೆ ಮಹಿಳೆಗೆ ಕಪಾಳಮೋಕ್ಷ ಮಾಡಿದ ಪೊಲೀಸ್..!

September 22, 2023

ಮೋದಕ ತಿನ್ನುತ ಇಂಡಿಗೋ ವಿಮಾನದಲ್ಲಿ ಬಂದಿಳಿದ ಗಣಪ..! ಫೋಟೋ ವೈರಲ್

September 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.