PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಓಲಾ ಶೇರಿಂಗ್, ಉಬರ್ ಪೂಲಿಂಗ್‌ʼಗೆ ಅವಕಾಶ ನೀಡಲು ಸಂಸದರ ಪಟ್ಟು: ಕೆರಳಿದ ಖಾಸಗಿ ಸಾರಿಗೆ ಚಾಲಕರು

October 2, 2023

BMTC ನೌಕರರಿಗೆ ಗುಡ್ ನ್ಯೂಸ್: ಡಿಪೋಗಳಲ್ಲೇ ಊಟ ತಿಂಡಿ ಒದಗಿಸುವ ಕ್ಯಾಂಟೀನ್‌ ಆರಂಭ!

October 2, 2023

ಗಾಂಧಿಜೀ ಅವರ ಕನಸಾದ ಸ್ವಚ್ಛ ಭಾರತ ಕನಸನ್ನ ನನಸು ಮಾಡಬೇಕಿದೆ: ಗ್ರಾ.ಪಂ.ಅಧ್ಯಕ್ಷ ಅಶೋಕ್

October 2, 2023
Facebook Twitter Instagram
Monday, October 2
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ಸಾಧ್ಯತೆ; ಪಿಟಿಐ ಬೆಂಬಲಿಗರನ್ನು ಚದುರಿಸಲು ಅಶ್ರುವಾಯು ಪ್ರಯೋಗ
ಅಂತರಾಷ್ಟ್ರೀಯ Prajatv KannadaBy Prajatv KannadaMarch 15, 2023

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ಸಾಧ್ಯತೆ; ಪಿಟಿಐ ಬೆಂಬಲಿಗರನ್ನು ಚದುರಿಸಲು ಅಶ್ರುವಾಯು ಪ್ರಯೋಗ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಲಾಹೋರ್‌ನಲ್ಲಿರುವ ಇಮ್ರಾನ್ ಖಾನ್ ಅವರ ಮನೆಯ ಕಾಂಪೌಂಡ್‌ಗೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ತೋಶಖಾನಾ ಪ್ರಕರಣದಲ್ಲಿ ಇಮ್ರಾನ್ ಬಂಧನವನ್ನು ತಡೆಯಲು ಪಾಕಿಸ್ತಾನದ ಉಚ್ಚಾಟಿತ ಪ್ರಧಾನಿ ನಿವಾಸದ ಹೊರಗೆ ಜಮಾಯಿಸಿದ ಬೆಂಬಲಿಗರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಬಳಸಿದ್ದಾರೆ.

ಪಾಕಿಸ್ತಾನದ ಪೊಲೀಸರು ಮತ್ತು ಇಮ್ರಾನ್ ಖಾನ್ ಅವರ ಬೆಂಬಲಿಗರು ಮಂಗಳವಾರ ಲಾಹೋರ್‌ನ ಪೂರ್ವ ನಗರದಲ್ಲಿರುವ ಮಾಜಿ ಪ್ರಧಾನಿ  ಮನೆಯ ಹೊರಗೆ ಮುಖಮುಖಿಯಾಗಿದ್ದು ಅವರ ಸಂಭವನೀಯ ಬಂಧನಕ್ಕೆ ಮುಂಚಿತವಾಗಿ ಹಲವರು ಗಾಯಗೊಂಡಿದ್ದಾರೆ ಎಂದು ಸರ್ಕಾರದ ವಕ್ತಾರರು ಹೇಳಿದ್ದಾರೆ.

ಪೊಲೀಸರು ಬೆಂಬಲಿಗರ ಮೇಲೆ ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್ ಗಳನ್ನು ಪ್ರಯೋಗಿಸಿದರು. ಮಂಗಳವಾರ ಸಂಜೆ ಖಾನ್ ವಿಡಿಯೊವೊಂದನ್ನು ಪೋಸ್ಟ್ ಮಾಡಿದ್ದು ತಾನು ಜೈಲಿಗೆ ಹೋದರೂ ಸಹ ಪ್ರಧಾನಿ ಶೆಹಬಾಜ್ ಷರೀಫ್ ಅವರ ಆಡಳಿತ ಪಕ್ಷಕ್ಕೆ ಸವಾಲು ಹಾಕುವುದನ್ನು ಮುಂದುವರಿಸಲು ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ.

ನನ್ನನ್ನು ಬಂಧಿಸಲು ಪೊಲೀಸರು ಬಂದಿದ್ದಾರೆ. ಇಮ್ರಾನ್ ಖಾನ್ ಜೈಲಿಗೆ ಹೋದರೆ ಜನ ನಿದ್ದೆ ಹೋಗುತ್ತಾರೆ ಎಂದು ಭಾವಿಸುತ್ತಾರೆ. ನೀವು ಅವರನ್ನು ತಪ್ಪು ಎಂದು ಸಾಬೀತುಪಡಿಸಬೇಕು, ಜನರು ಜೀವಂತವಾಗಿದ್ದಾರೆ ಎಂದು ನೀವು ಸಾಬೀತುಪಡಿಸಬೇಕು ಎಂದಿದ್ದಾರೆ ಖಾನ್. ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಕಾರ್ಯಕರ್ತರು ಹಿಂಸಾಚಾರವನ್ನು ಪ್ರಾರಂಭಿಸಿದ್ದು ಇದರಲ್ಲಿ ಹಲವಾರು ಪೊಲೀಸ್ ಅಧಿಕಾರಿಗಳಿಗೆ ಗಾಯವಾಗಿದೆ ಎಂದು ಸರ್ಕಾರದ ವಕ್ತಾರ ಅಮೀರ್ ಮಿರ್ ರಾಯಿಟರ್ಸ್​​ಗೆ ತಿಳಿಸಿದ್ದಾರೆ. “ಇಮ್ರಾನ್ ಖಾನ್ ನ್ಯಾಯಾಲಯದಲ್ಲಿ ತನ್ನ ಉಪಸ್ಥಿತಿಯನ್ನು ಖಾತ್ರಿಪಡಿಸಿದರೆ ಒಳ್ಳೆಯದು, ಇಲ್ಲದಿದ್ದರೆ ಕಾನೂನು ಅದರ ರೀತಿಯಲ್ಲಿ ಮುಂದುವರಿಯುತ್ತದೆ ಎಂದಿದ್ದಾರೆ.

 

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಅಭಿವ್ಯಕ್ತಿ ಸ್ವಾತಂತ್ರ್ಯವು ಹಿಂಸಾಚಾರದ ಕುಮ್ಮಕ್ಕು ನೀಡುವ ಮಟ್ಟಿಗೆ ಇರುತ್ತದೆ: ಎಸ್ ಜೈಶಂಕರ್

October 2, 2023

ಎಲೋನ್ ಮಸ್ಕ್ ಟ್ವಿಟ್ಟರ್ ವಹಿಸಿಕೊಂಡ ನಂತರ ಬಳಕೆದಾರರ ಸಂಖ್ಯೆ ಕುಸಿತ ಕಂಡಿದೆ: ಸಿಇಒ

October 2, 2023

ಭವಿಷ್ಯದಲ್ಲಿ ಕೊರೊನಾ ವೈರಸ್‌ನ ಹೊಸ ತಳಿಗಳು ಸಾಂಕ್ರಾಮಿಕ ಸೃಷ್ಟಿಸಬಹುದು: ಚೀನಾ

September 30, 2023

ಒಂದೇ ವರ್ಷಕ್ಕೆ 45 ಕೆಜಿ ತೂಕ ಇಳಿಸಿಕೊಂಡಿದ್ದ ಬ್ರೆಜಿಲ್‌ನ ಫಿಟ್ನೆಸ್ : ನಿಗೂಢ ರೋಗಕ್ಕೆ ಬಲಿ!

September 30, 2023

ಪೋಷಕರು ಮಕ್ಕಳಿಗೆ ಪೋಲಿಯೋ ಲಸಿಕೆ ಕೊಡಿಸದಿದ್ರೆ ಜೈಲು: ಪಾಕ್’ನಲ್ಲಿ ಹೊಸ ಕಾನೂನು!

September 30, 2023

ಹುಲ್ಲು ಎಂದು ಭಾವಿಸಿ ಬರೋಬ್ಬರಿ 100 ಕೆಜಿ ಗಾಂಜಾ ಸೊಪ್ಪನ್ನ ತಿಂದ ಕುರಿಹಿಂಡು!

September 29, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.