ಬೆಂಗಳೂರು ;- ದಿನವೊಂದಕ್ಕೆ ಒಂದು ಕೇಂದ್ರದಿಂದ 60 ಅರ್ಜಿಗಳನ್ನು ಮಾತ್ರ ಸ್ವೀಕರಿಸುವಂತೆ ಸುತ್ತೋಲೆ ಹೊರಡಿಸಿದ್ದ ಸರ್ಕಾರದ ನಿರ್ಧಾರದಿಂದ ‘ಗೃಹಲಕ್ಷ್ಮಿಯರು’ ಸಹನೆ ಕಳೆದುಕೊಂಡಿದ್ದಾರೆ.
60 ಅರ್ಜಿ ಸ್ವೀಕರಿಸುವ ಕೇಂದ್ರದಲ್ಲಿ 200-300 ಮಹಿಳೆಯರು ನೋಂದಣಿಗೆ ತೆರಳಿರುವುದರಿಂದ ಕೇಂದ್ರದ ಸಿಬ್ಬಂದಿ ಹೈರಾಣಾಗಿದ್ದಾರೆ. ಈ ಸಮಸ್ಯೆ ಉಂಟಾಗಿದ್ದರಿಂದ ಒಂದು ದಿನದ ನಂತರ ಸರ್ಕಾರ ನಿಯಮ ಬದಲಾಯಿಸಿದ್ದು, ದಿನದ ನೋಂದಣಿ ಮಿತಿಯನ್ನು ತೆರವುಗೊಳಿಸಿದೆ.
ಮೊಬೈಲ್ಗೆ ನೋಂದಣಿ ವೇಳಾಪಟ್ಟಿಯ ಸಂದೇಶ ಬಾರದಿದ್ದವರು ಸರ್ಕಾರ ನೀಡಿರುವ 1902 ಅಥವಾ 8147500500 ನಂಬರ್ಗೆ ಪಡಿತರ ಕಾರ್ಡ್ ಸಂಖ್ಯೆಯನ್ನು ಎಸ್ಎಂಎಸ್ ಮಾಡಿ ತಾವು ನೋಂದಾಯಿಸುವ ಸ್ಥಳ, ಸಮಯವನ್ನು ತಿಳಿದುಕೊಳ್ಳಬಹುದಾಗಿದೆ. ಹೀಗೆ, ಎಸ್ಎಂಎಸ್ ಮಾಡಿದ ಕೆಲವರಿಗೆ 2024ರ ಜನವರಿ ಮತ್ತು ಫೆಬ್ರವರಿಗೆ ಬಂದು ಕೇಂದ್ರದಲ್ಲಿ ನೋಂದಣಿ ಮಾಡಿಸಿಕೊಳ್ಳಿ ಎಂದು ಎಸ್ಎಂಎಸ್ ಬರುತ್ತಿವೆ. ಒಂದು ವೇಳೆ 2024ರಲ್ಲಿ ನೋಂದಣಿ ಮಾಡಿಸಿಕೊಳ್ಳುವಂತಾದರೆ ಕನಿಷ್ಠ ಐದಾರು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ. ಅಂದರೆ ಸುಮಾರು 10ರಿಂದ 12 ಸಾವಿರ ರೂ. ಫಲಾನುಭವಿಗಳಿಗೆ ನಷ್ಟವಾಗುತ್ತದೆ. ಹೀಗಾಗಿ, ಸರ್ಕಾರ ನೋಂದಣಿಯ ದಿನಾಂಕವನ್ನು ಮತ್ತೊಮ್ಮೆ ಪರಿಶೀಲಿಸಿ ಆಗಸ್ಟ್ ತಿಂಗಳಾಂತ್ಯದೊಳಗೆ ಖಾತೆಗೆ ಹಣ ಜಮಾ ಆಗುವಂತೆ ಮಾಡಬೇಕೆಂದು ಫಲಾನುಭವಿಗಳು ಆಗ್ರಹಿಸಿದ್ದಾರೆ.