PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Monday, September 25
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » WTC Final ಪಂದ್ಯ : ಕೆ.ಎಲ್‌ ರಾಹುಲ್‌ಗೆ ಕೀಪಿಂಗ್‌ ಜವಾಬ್ದಾರಿ ಕೊಡಿ ಎಂದ ಸುನೀಲ್ ಗವಾಸ್ಕರ್‌!
ಕ್ರೀಡೆ Prajatv KannadaBy Prajatv KannadaMarch 15, 2023

WTC Final ಪಂದ್ಯ : ಕೆ.ಎಲ್‌ ರಾಹುಲ್‌ಗೆ ಕೀಪಿಂಗ್‌ ಜವಾಬ್ದಾರಿ ಕೊಡಿ ಎಂದ ಸುನೀಲ್ ಗವಾಸ್ಕರ್‌!

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು : ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಆಯೋಜಿತ ಟೂರ್ನಿಗಳಲ್ಲಿ ಕಳೆದ 10 ವರ್ಷಗಳಲ್ಲಿ ಟೀಮ್ ಇಂಡಿಯಾ ಅನುಭವಿಸಿರುವ ಪ್ರಶಸ್ತಿಗಳ ಬರ ನೀಗಿಸಿಕೊಳ್ಳಲು ಮತ್ತೊಂದು ಅವಕಾಶ ಒದಗಿಬಂದಿದೆ. ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ಷಿಪ್‌ ಟೂರ್ನಿಯ ಎರಡನೇ ಆವೃತ್ತಿಯಲ್ಲೂ ಭಾರತ ತಂಡ ಫೈನಲ್‌ಗೆ ಕಾಲಿಟ್ಟಿದೆ. ಜೂನ್‌ 7ರಿಂದ 11ರವರೆಗೆ ಇಂಗ್ಲೆಂಡ್‌ನ ದಿ ಓವಲ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ರೊಹಿತ್‌ ಶರ್ಮಾ ಸಾರಥ್ಯದ ಭಾರತ ತಂಡ ಅಂಕಪಟ್ಟಿಯ ಅಗ್ರಸ್ಥಾನಿ ಆಸ್ಟ್ರೇಲಿಯಾ ಎದುರು ಪೈಪೋಟಿ ನಡೆಸಲಿದೆ.

ಇತ್ತೀಚಿನ ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಸರಣಿಯಲ್ಲೂ ಭಾರತ 2-1 ಅಂತರದ ಜಯ ದಾಖಲಿಸಿತು. ಈ ಬಗ್ಗೆ ಮಾತನಾಡಿರುವ ಭಾರತ ತಂಡದ ಮಾಜಿ ನಾಯಕ ಸುನೀಲ್‌ ಗವಾಸ್ಕರ್‌, ಟೆಸ್ಟ್‌ ವಿಶ್ವ ಚಾಂಪಿಯನ್‌ಷಿಪ್‌ ಫೈನಲ್‌ ಪಂದ್ಯಕ್ಕೆ ಭಾರತ ತಂಡ ತನ್ನ ಆಡುವ ಹನ್ನೊಂದರ ಬಳಗದಲ್ಲಿ ಸೇರಿಸಿಕೊಳ್ಳಬೇಕಾದ ಬಹುಮುಖ್ಯ ಆಟಗಾರನನ್ನು ಹೆಸರಿದಿದ್ದಾರೆ. ಕೆ.ಎಸ್‌ ಭರತ್‌ ಮತ್ತು ಇಶಾನ್‌ ಕಿಶನ್‌ ಇಬ್ಬರೂ ಬೇಡ ಟೆಸ್ಟ್‌ ಕ್ರಿಕೆಟ್‌ನ ವಿಕೆಟ್‌ಕೀಪಿಂಗ್‌ ಜವಾಬ್ದಾರಿಯನ್ನು ಕಳಪೆ ಲಯದಿಂದ ಹೊರಬಿದ್ದಿರುವ ಕೆ.ಎಲ್‌ ರಾಹುಲ್‌ಗೆ ವಹಿಸಬೇಕು ಎಂದು ಲಿಟ್ಲ್‌ ಮಾಸ್ಟರ್‌ ಅಭಿಪ್ರಾಯಪಟ್ಟಿದ್ದಾರೆ.

“ಕೆ.ಎಲ್‌ ರಾಹುಲ್‌ ಅವರನ್ನು ವಿಕೆಟ್‌ಕೀಪರ್‌ ಎಂದು ಕಾಣಬಹುದು. ಟೆಸ್ಟ್‌ ವಿಶ್ವ ಚಾಂಪಿಯನ್‌ಷಿಪ್‌ ಫೈನಲ್‌ನಲ್ಲಿ ಕೆ.ಎಲ್‌ ರಾಹುಲ್‌ 5-6ನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡಿದರೆ ತಂಡದ ಬಲ ಹೆಚ್ಚಲಿದೆ. ಕಳೆದ ವರ್ಷ ಅವರು ಇಂಗ್ಲೆಂಡ್‌ನಲ್ಲಿ ಅತ್ಯುತ್ತಮವಾಗಿ ಬ್ಯಾಟ್‌ ಮಾಡಿದರು. ಲಾರ್ಡ್ಸ್‌ನಲ್ಲಿ ಶತಕ ಬಾರಿಸಿದ್ದರು. ಹೀಗಾಗಿ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ ಪಂದ್ಯಕ್ಕೆ ಟೀಮ್ ಇಂಡಿಯಾ ಇಲೆವೆನ್‌ ಆಯ್ಕೆ ಮಾಡುವಾಗ ಕೆ.ಎಲ್‌ ರಾಹುಲ್‌ ಬಗ್ಗೆ ಗಮನವಿರಲಿ,” ಎಂದು ಸ್ಪೋರ್ಟ್ಸ್‌ ತಕ್‌ ಕಾರ್ಯಕ್ರಮದಲ್ಲಿ ಗವಾಸ್ಕರ್‌ ಹೇಳಿದ್ದಾರೆ. ಕೆ.ಎಲ್ ರಾಹುಲ್‌ ಈಗಾಗಗಲೇ ವೈಟ್‌ಬಾಲ್‌ ಕ್ರಿಕೆಟ್‌ನಲ್ಲಿ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಆಗಿ ಸೈ ಎನಿಸಿಕೊಂಡಿದ್ದಾರೆ. ಭಾರತ ಒಡಿಐ ತಂಡದಲ್ಲಿ ಮೊದಲ ಆಯ್ಕೆ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಆಗಿದ್ದಾರೆ.

ಭಾರತ ಗೆಲ್ಲುವ ಫೇವರಿಟ್‌
ಅಂದಹಾಗೆ 2021ರಲ್ಲಿ ಇಂಗ್ಲೆಂಡ್‌ನ ರೋಸ್‌ಬೌಲ್‌ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲ ಆವೃತ್ತಿಯ ಫೈನಲ್‌ನಲ್ಲಿ ವಿರಾಟ್‌ ಕೊಹ್ಲಿ ಸಾರಥ್ಯದ ಭಾರತ ತಂಡ ನ್ಯೂಜಿಲೆಂಡ್‌ ಎದುರು ನಿರಾಶೆ ಅನುಭವಿಸಿತ್ತು. ಆದರೆ, ಈ ಬಾರಿ ರೋಹಿತ್‌ ಶರ್ಮಾ ಸಾರಥ್ಯದಲ್ಲಿ ಆಸೀಸ್‌ ಎದುರು ಟೀಮ್ ಇಂಡಿಯಾ ಗೆಲ್ಲುವ ಫೇವರಿಟ್‌ ಎನಿಸಿದೆ. ಏಕೆಂದರೆ ಆಸೀಸ್‌ ಎದುರು ಆಡಿರುವ ಕಳೆದ ನಾಲ್ಕು ಟೆಸ್ಟ್‌ ಸರಣಿಗಳಲ್ಲಿ ಭಾರತ ತಂಡ ಜಯ ದಾಖಲಿಸಿದೆ. ಕಾಂಗರೂಗಳ ಎದುರು ಕಳೆದ 40 ವರ್ಷಗಳಲ್ಲಿ ಸತತ 4 ಟೆಸ್ಟ್‌ ಸರಣಿ ಗೆದ್ದ ವಿಶ್ವದ ಏಕಮಾತ್ರ ತಂಡ ಎಂಬ ಹೆಗ್ಗಳಿಕೆ ಕೂಡ ಪಡೆದಿದ್ದು, ಫೈನಲ್‌ ಹಣಾಹಣಿಗೂ ಮುನ್ನ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ.

ರಾಹುಲ್‌ಗೆ ಗಿಲ್‌ ತಡೆಗೋಡೆ
ಕಳೆದ ನಾಲ್ಕು ಟೆಸ್ಟ್‌ ಪಂದ್ಯಗಳಲ್ಲಿ ಕೆ.ಎಲ್‌ ರಾಹುಲ್‌ ಗಳಿಸಿರುವುದು ಕೇವಲ 315 ರನ್‌ಗಳನ್ನು ಮಾತ್ರ. ಆಸೀಸ್‌ ವಿರುದ್ಧದ ಇತ್ತೀಚಿನ ಸರಣಿಯ ಮೊದಲ ಎರಡು ಪಂದ್ಯಗಳ ಬಳಿಕ ಕೆ.ಎಲ್‌ ರಾಹುಲ್‌ ಅವರನ್ನು ಕೈಬಿಟ್ಟ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್‌ ಯುವ ಓಪನರ್‌ ಶುಭಮನ್‌ ಗಿಲ್‌ಗೆ ಅವಕಾಶ ನೀಡಿತ್ತು. ಇದರ ಸದ್ಬಳಕೆ ಮಾಡಿದ್ದ ಗಿಲ್‌ ಅಹ್ಮದಾಬಾದ್‌ ಟೆಸ್ಟ್‌ನಲ್ಲಿ ಶತಕ ಬಾರಿಸಿ ತಮ್ಮ ಸ್ಥಾನ ಭದ್ರಪಡಿಸಿಕೊಂಡು, ರಾಹುಲ್‌ ಕಮ್‌ಬ್ಯಾಕ್‌ಗೆ ತಡೆಗೋಡೆಯಾಗಿದ್ದಾರೆ.

ಅವಕಾಶ ಸಿಗುವುದು ಅನುಮಾನ
ಕೆ.ಎಲ್‌ ರಾಹುಲ್‌ ಸದ್ಯಕ್ಕೆ ಟೆಸ್ಟ್ ತಂಡದ ಆಡುವ 11ರಿಂದ ಹೊರಬಿದ್ದಿದ್ದಾರೆ. ಮುಂಬರುವ ಟೆಸ್ಟ್‌ ಸರಣಿಗಳಲ್ಲಿ ರಾಹುಲ್‌ ಸ್ಥಾನದಲ್ಲಿ ಅಭಿಮನ್ಯು ಈಶ್ವರನ್‌ ತಂಡ ಸೇರಿಕೊಳ್ಳುವ ಸಾಧ್ಯತೆ ಇದೆ. ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ನಿಟ್ಟಿನಲ್ಲಿ ಇಶಾನ್‌ ಕಿಶನ್‌ಗೆ ಸಡ್ಡುಹೊಡೆದಿರುವ ಕೆ.ಎಸ್‌ ಭರತ್‌ ಮುಂಚೂಣಿಯಲ್ಲಿದ್ದಾರೆ. ಆಸೀಸ್‌ ವಿರುದ್ಧದ ಟೆಸ್ಟ್‌ ಸರಣಿಯ ನಾಲ್ಕೂ ಪಂದ್ಯಗಳಲ್ಲಿ ಭರತ್ ಕೀಪಿಂಗ್‌ ಜವಾಬ್ದಾರಿ ನಿಭಾಯಿಸಿ ಸೈ ಎನಿಸಿಕೊಂಡಿದ್ದಾರೆ. ಆದರೆ, ಬ್ಯಾಟಿಂಗ್‌ನಲ್ಲಿ ಹೇಳಿಕೊಳ್ಳುವ ಪ್ರದರ್ಶನ ಅವರಿಂದ ಈವರೆಗೆ ಬಂದಿಲ್ಲ.

 

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಭಾರತೀಯ ಏಷ್ಯನ್ ಗೇಮ್ಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಶಫಾಲಿ ವರ್ಮಾ

September 23, 2023

ಟೀಮ್ ಇಂಡಿಯಾ ಆಯ್ಕೆ ಮಾಡಿದ ಶ್ರೀಲಂಕಾ ದಿಗ್ಗಜ ಅರ್ಜುನ ರಣತುಂಗ

September 23, 2023

ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಜಯ

September 23, 2023

ಮಳೆಯಿಂದ ಭಾರತ-ಮಲೇಷ್ಯಾ ಪಂದ್ಯ ರದ್ದು, ರನ್ ರೇಟ್ ಆಧಾರಿಸಿ ಕ್ವಾರ್ಟರ್ ಫೈನಲ್‍ಗೆ ಟೀಂ ಇಂಡಿಯಾ

September 22, 2023

ಈ ಬಾರಿ ವಿಶ್ವಕಪ್‌ ಗೆಲ್ಲಲು ಕ್ರಿಕೆಟಿಗರ ಕಸರತ್ತು ಹೇಗಿದೆ ಗೊತ್ತಾ?

September 22, 2023

ಈ ಸಲ ವಿಶ್ವಕಪ್‌ ಸಿಗೋದು ಇವರಿಂದಲೇ: ಕ್ರಿಕೆಟ್‌ ದಿಗ್ಗಜರ ವಿಶ್ವಾಸ: ಯಾರಿದು?

September 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.